Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:32 - ಪರಿಶುದ್ದ ಬೈಬಲ್‌

32 ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜೆ ಕಾಯ್ ಅಪ್ನಿ ಬಗಟ್ಲ್ಯಾನಾಯ್, ಅನಿ ಆಯಿಕ್ಲ್ಯಾನಾಯ್ ತ್ಯೆಚ್ಯಾ ವಿಶಯಾತುಚ್ ಲೊಕಾ ಸ್ವಿಕಾರ್ ಕರಿನಾತ್. ಖರೆ ಅಜುನ್‍ಬಿ ಕೊನ್ಬಿ ತೆನಿ ದಿಲ್ಲಿ ಸಾಕ್ಷಿ ಮಾನುನ್ ಘೆಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:32
13 ತಿಳಿವುಗಳ ಹೋಲಿಕೆ  

ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.


ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.


ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ.


ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.


ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.


ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿಕೊಂಡವರು ಯಾರು?


ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು