Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:34 - ಪರಿಶುದ್ದ ಬೈಬಲ್‌

34 ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆ ಕೊನಾಕ್ ದೆವಾನ್ ಧಾಡುನ್ ದಿಲ್ಯಾನಾಯ್ ತೊ ದೆವಾಚ್ಯಾಚ್ ಗೊಸ್ಟಿಯಾ ಬೊಲ್ತಾ, ಕಶ್ಯಾಕ್ ಮಟ್ಲ್ಯಾರ್ ದೆವ್ ತೆಕಾ ಅಪ್ನಾಚೊ ಆತ್ಮೊ ಭರ್‍ಪುರ್ ಮಾಪಾನಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:34
29 ತಿಳಿವುಗಳ ಹೋಲಿಕೆ  

ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


“ನಾನು ತಂದೆಯ ಬಳಿಯಿಂದ ಸಹಾಯಕನನ್ನು ನಿಮಗೆ ಕಳುಹಿಸಿಕೊಡುವೆನು. ತಂದೆಯ ಬಳಿಯಿಂದ ಬರುವ ಆ ಸಹಾಯಕನು ಸತ್ಯದ ಆತ್ಮನಾಗಿದ್ದಾನೆ. ಆತನು ಬಂದಾಗ ನನ್ನ ಬಗ್ಗೆ ನಿಮಗೆ ತಿಳಿಸುವನು.


“ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)


ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ಯೇಸು, “ನಾನು ಉಪದೇಶಿಸುವ ಸಂಗತಿಗಳು ನನ್ನ ಸ್ವಂತವಾದವುಗಳಲ್ಲ. ನನ್ನ ಉಪದೇಶವು ನನ್ನನ್ನು ಕಳುಹಿಸಿದಾತನಿಂದ (ದೇವರು) ಬರುತ್ತದೆ.


ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.


ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.


ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.


ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.


ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.


ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು