Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:10 - ಪರಿಶುದ್ದ ಬೈಬಲ್‌

10 ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ ತಿಕಾ “ದೆವ್ ಕಾಯ್ ದಿತಾ, ಅನಿ ಫಿವ್ಕ್ ಉಲ್ಲೆ ಪಾನಿ ದಿ ಮನುನ್ ತುಜೆಕ್ಡೆ ಮಾಗ್ತಲೊ ಕೊನ್ ಮನುನ್ ತುಕಾ ಗೊತ್ತ್ ರ್‍ಹಾಲ್ಯಾರ್, ತಿಯಾಚ್ ತೆಚೆಕ್ಡೆ ಮಾಗಿ ಹೊತ್ತೆ, ಅನಿ ತೊ ತುಕಾ ಜಿವ್‍ದಿತಲೆ ಪಾನಿ ದಿ ಹೊತ್ತೊ” ಮನುನ್ ಜಬಾಬ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:10
49 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ಆ ಸಮಯದಲ್ಲಿ ಜೆರುಸಲೇಮಿನಿಂದ ನೀರು ಹರಿಯುತ್ತಲೇ ಇರುವದು. ಆ ನದಿಯು ಇಬ್ಭಾಗವಾಗಿ ಒಂದು ಭಾಗ ಪೂರ್ವಕ್ಕೆ ಹರಿಯುವದು. ಇನ್ನೊಂದು ಭಾಗ ಪಶ್ಚಿಮಕ್ಕೆ ಹರಿದು ಮೆಡಿಟರೇನಿಯನ್ ಸಮುದ್ರವನ್ನು ಸೇರುವದು. ಈ ನದಿಯು ಎಲ್ಲಾ ಕಾಲದಲ್ಲಿಯೂ ಬೇಸಿಗೆ, ಹಿಮಕಾಲವೆನ್ನದೆ ಹರಿಯುತ್ತಲೇ ಇರುವದು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.


ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.


ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ವರ್ಣಿಸಲಸಾಧ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.


ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.


ನೀನು ತೋಟದ ಬುಗ್ಗೆಯಂತಿರುವೆ; ಹೊಸ ನೀರಿನ ಬಾವಿಯಂತಿರುವೆ; ಲೆಬನೋನಿನ ಬೆಟ್ಟಗಳಿಂದ ಹರಿದುಬರುತ್ತಿರುವ ನೀರಿನಂತಿರುವೆ.


ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು