Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:11 - ಪರಿಶುದ್ದ ಬೈಬಲ್‌

11 ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ಬಾಯ್ಕೊಮನ್ಸಿನ್, “ಸಾಯ್ಬಾ, ತುಜೆಕ್ಡೆ ಘಾಗರ್ ನಾ, ಅನಿ ಭಾಂಯ್‍ಬಿ ಬರಿಚ್ ಖೊಲ್ ಹಾಯ್, ಜಿವ್ ದಿತಲೆ ಪಾನಿ ತುಕಾ ಕಶೆ ಗಾವ್ತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:11
10 ತಿಳಿವುಗಳ ಹೋಲಿಕೆ  

ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


ಸಿಂಹಾಸನದ ಮೇಲೆ ಕುಳಿತಿದ್ದಾತನು ನನಗೆ ಹೀಗೆ ಹೇಳಿದನು: “ಎಲ್ಲವೂ ನೆರವೇರಿತು! ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ಬಾಯಾರಿದವರಿಗೆ ನಾನು ಜೀವಜಲದ ಬುಗ್ಗೆಯಿಂದ ನೀರನ್ನು ಉಚಿತವಾಗಿ ಕೊಡುತ್ತೇನೆ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು