Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:14 - ಪರಿಶುದ್ದ ಬೈಬಲ್‌

14 ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮಿಯಾ ದಿಲ್ಲೆ ಪಾನಿ ಜೆ ಕೊನ್ ಫಿತಾ, ತೆಕಾ ಕನ್ನಾಬಿ ಅನಿ ಪರ್ತುನ್ ಸೊಸ್‍ಲಾಗಿನಾ. ಮಿಯಾ ದಿಲ್ಲೆ ಪಾನಿ ದಿತಲೆ ಪಾನಿ ಭುತ್ತುರ್ ಎಕ್ ಝರೊ ಸರ್ಕೆ ತೆಂಕಾ ಜಿವ್ ದಿತಲೆ ಪಾನಿ ದಿವ್ನಗೆತುಚ್ ರ್‍ಹಾತಾ, ಅನಿ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:14
32 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.


ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.


ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”


ಇದು ಮೃತ್ಯುಸಮುದ್ರವನ್ನು ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು, ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.


ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ಆ ಸ್ತ್ರೀಯು, “ಅಯ್ಯಾ, ಆ ಜೀವಜಲ ನಿನಗೆಲ್ಲಿ ಸಿಕ್ಕುವುದು? ಬಾವಿಯು ಬಹು ಆಳವಾಗಿದೆ ಮತ್ತು ನೀರು ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ.


ಯೇಸು, “ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೂ ಮತ್ತೆ ದಾಹವಾಗುವುದು.


ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.


“ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು