Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:22 - ಪರಿಶುದ್ದ ಬೈಬಲ್‌

22 ನೀವು ನಿಮಗೆ ತಿಳಿದಿಲ್ಲದ ಯಾವುದನ್ನೋ ಆರಾಧಿಸುತ್ತೀರಿ. ನಮಗಾದರೋ ನಾವು ಯಾರನ್ನು ಆರಾಧಿಸುತ್ತಿದ್ದೇವೆ ಎಂಬುದು ತಿಳಿದಿದೆ. ರಕ್ಷಣೆಯು ಯೆಹೂದ್ಯರಿಂದ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ. ಆದದರಿಂದ ನಾವು ಅರಿತಿರುವದನ್ನೇ ಆರಾಧಿಸುವವರಾಗಿದ್ದೇವೆ; ನೀವು ಅರಿಯದೆ ಇರುವಂಥದನ್ನು ಆರಾಧಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತುಮ್ಕಾ ಸಮಾರಿಯಾಚ್ಯಾ ಲೊಕಾಕ್ನಿ ತುಮಿ ಕೊನಾಚಿ ಆರಾದಾನ್ ಕರುಕ್ ಲಾಗ್ಲ್ಯಾಶಿ ಮನುನ್ ಗೊತ್ತ್ ನಾ; ಖರೆ ಅಮ್ಕಾ ಜುದೆವಾಕ್ನಿ ಅಮಿ ಕೊನಾಚಿ ಆರಾದಾನ್ ಕರುಲಾಂವ್ ಮನುನ್ ಅಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್, ಸುಟ್ಕಾ ಜುದೆವ್ ಲೊಕಾನಿತ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:22
20 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.


ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.


ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು