Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:36 - ಪರಿಶುದ್ದ ಬೈಬಲ್‌

36 ಈಗಲೂ ಸಹ, ಬೆಳೆಯನ್ನು ಕೊಯ್ಯುವವನಿಗೆ ಕೂಲಿ ದೊರೆಯುತ್ತದೆ. ಅವನು ಬೆಳೆಗಳನ್ನು ನಿತ್ಯಜೀವಕ್ಕಾಗಿ ಕೂಡಿಸುತ್ತಿದ್ದಾನೆ. ಆದ್ದರಿಂದ ಈಗ ಬಿತ್ತುವವರೂ ಮತ್ತು ಕೊಯ್ಯುವವರೂ ಒಟ್ಟಿಗೆ ಸಂತೋಷವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಪಿಕಾ ಕಾತರ್‍ತಲ್ಯಾಕ್ ತೆಂಚಿ ಮಜುರಿ ದಿವ್ನ್ ಹೊಲಾ, ಅನಿ ತೊ ತೆ ಪಿಕ್ಕ್ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಸಾಟ್ನಿ ಗೊಳಾ ಕರ್‍ತಾ; ಅಶೆ ಪೆರಲ್ಲೊ ಅನಿ ಕಾತರ್‍ತಲೊ ದೊಗೆಬಿ ವಾಂಗ್ಡಾ ಕುಶಿ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:36
20 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.


ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.


ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ದಾಹವಾಗುವುದೇ ಇಲ್ಲ. ನಾನು ಅವನಿಗೆ ಕೊಡುವ ನೀರು ಅವನೊಳಗೆ ಉಕ್ಕಿಹರಿಯುವ ನೀರಿನ ಬುಗ್ಗೆಯಾಗುವುದು. ಆ ನೀರು ಅವನಿಗೆ ನಿತ್ಯಜೀವವನ್ನು ತರುತ್ತದೆ” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.


ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು