Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:38 - ಪರಿಶುದ್ದ ಬೈಬಲ್‌

38 ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನೀವು ಕಷ್ಟಮಾಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು; ಬೇರೊಬ್ಬರು ಕಷ್ಟಮಾಡಿದ್ದಾರೆ; ನೀವು ನಡುವೆ ಅವರ ಕಷ್ಟದಲ್ಲಿ ಸೇರಿದ್ದೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನೀವು ಪ್ರಯಾಸ ಪಡದಂಥದ್ದನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಇತರರು ಪ್ರಯಾಸಪಟ್ಟರು. ನೀವು ಅವರ ಪ್ರಯಾಸದ ಫಲವನ್ನು ಪಡೆದಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಿಯಾ ಕಾಮ್ ಕರಿನಸಲ್ಲ್ಯಾ ಶೆತಾತ್ನಿ ಮಿಯಾ ತುಕಾ ಪಿಕ್ ಕಾತ್ರುಕ್ ಧಾಡ್ತಾ; ಥೈ ದುಸ್ರ್ಯಾನಿ ರಾಬ್ಲ್ಯಾನಾತ್ ಖರೆ ತೆಚೊ ಫಾಯ್ದೊ ತುಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:38
20 ತಿಳಿವುಗಳ ಹೋಲಿಕೆ  

ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.


ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ನಾನು ಮತ್ತೆಮತ್ತೆ ನನ್ನ ಪ್ರವಾದಿಗಳನ್ನು ಆ ಜನರಲ್ಲಿಗೆ ಕಳಿಸಿಕೊಟ್ಟೆ. ಆ ಪ್ರವಾದಿಗಳು ನನ್ನ ಸೇವಕರಾಗಿದ್ದರು. ಆ ಪ್ರವಾದಿಗಳು ನನ್ನ ಸಂದೇಶವನ್ನು ಜನರಿಗೆ ತಿಳಿಸಿ ‘ಈ ದುಷ್ಕೃತ್ಯವನ್ನು ಮಾಡಬೇಡಿರಿ, ನೀವು ಈ ವಿಗ್ರಹಗಳ ಪೂಜೆಮಾಡುವದನ್ನು ನಾನು ದ್ವೇಷಿಸುತ್ತೇನೆ’ ಎಂದು ಹೇಳಿದರು.


‘ಒಬ್ಬನು ಬಿತ್ತುತ್ತಾನೆ, ಆದರೆ ಮತ್ತೊಬ್ಬನು ಬೆಳೆಯನ್ನು ಕೊಯ್ಯುತ್ತಾನೆ’ ಎಂದು ನಾವು ಹೇಳುವ ನಾಣ್ಣುಡಿ ಸತ್ಯವಾದದ್ದು.


ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.


ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ.


ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು