Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:39 - ಪರಿಶುದ್ದ ಬೈಬಲ್‌

39 ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತ್ಯಾ ಬಾಯ್ಕೊಮನ್ಸಿನ್ “ಮಿಯಾ ಕರಲ್ಲೆ ಸಗ್ಳೆ ತೆನಿ ಮಾಕಾ ಸಾಂಗ್ಲ್ಯಾನ್” ಮನುನ್ ಸಾಂಗಲ್ಲ್ಯಾ ತನ್ನಾ ತ್ಯಾ ಶಾರಾತ್ಲ್ಯಾ ಸುಮಾರ್ ಸಮಾರಿಯಾಚ್ಯಾ ಲೊಕಾನಿ ಜೆಜುಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:39
11 ತಿಳಿವುಗಳ ಹೋಲಿಕೆ  

“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಯೇಸು ಸಮಾರ್ಯದ ಪಟ್ಟಣವಾದ ಸಿಖಾರ್ ಎಂಬಲ್ಲಿಗೆ ಬಂದನು. ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿ ಆ ಊರಿದೆ.


ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.


ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.


(ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)


ಆದ್ದರಿಂದ ಜನರು ಆತನನ್ನು ನೋಡಲು ಪಟ್ಟಣದಿಂದ ಹೊರಬಂದರು.


ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.


ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು.


ಯೋಹಾನನ ಈ ಮಾತನ್ನು ಕೇಳಿದ ಆ ಇಬ್ಬರು ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು