Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:40 - ಪರಿಶುದ್ದ ಬೈಬಲ್‌

40 ಸಮಾರ್ಯದವರು ಯೇಸುವಿನ ಬಳಿಗೆ ಹೋಗಿ ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಂಡರು. ಆದ್ದರಿಂದ ಆತನು ಅಲ್ಲಿ ಎರಡು ದಿನ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದ್ದರಿಂದ ಆ ಸಮಾರ್ಯರು ಆತನ ಬಳಿಗೆ ಬಂದು - ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅವರಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತೆಚೆಸಾಟ್ನಿ ತ್ಯಾ ಸಮಾರಿಯಾಚ್ಯಾ ಲೊಕಾನಿ ಜೆಜುಕ್ಡೆ “ತಿಯಾ ಅಮ್ಚ್ಯಾ ವಾಂಗ್ಡಾ ರ್‍ಹಾ” ಮನುನ್ ಲೈ ಮಾಗ್ಲ್ಯಾನಿ ತನ್ನಾ ಜೆಜು ದೊನ್ ದಿಸ್ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:40
15 ತಿಳಿವುಗಳ ಹೋಲಿಕೆ  

ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಆದರೆ ಅವರು ಆತನಿಗೆ, “ಈಗ ಹೊತ್ತಾಯಿತು, ರಾತ್ರಿಯಾಗುತ್ತಾ ಬಂದಿದೆ. ನಮ್ಮೊಂದಿಗೆ ಇರು” ಎಂದು ಬೇಡಿಕೊಂಡರು. ಆದ್ದರಿಂದ ಆತನು ಅವರೊಂದಿಗಿರಲು ಊರೊಳಗೆ ಹೋದನು.


ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.


ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.


ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.


ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ಆಕೆಗೆ ಮರಿಯಳೆಂಬ ತಂಗಿ ಇದ್ದಳು. ಮರಿಯಳು ಯೇಸುವಿನ ಪಾದಗಳ ಬಳಿ ಕುಳಿತುಕೊಂಡು ಆತನ ಉಪದೇಶವನ್ನು ಕೇಳುತ್ತಿದ್ದಳು. ಆದರೆ ಆಕೆಯ ಸಹೋದರಿಯಾದ ಮಾರ್ಥಳು ಅತಿಥಿಸತ್ಕಾರ ಮಾಡುತ್ತಿದ್ದಳು.


ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.


ಆತನು ಹೇಳಿದ ಸಂಗತಿಗಳನ್ನು ಕೇಳಿ ಇನ್ನೂ ಅನೇಕ ಜನರು ನಂಬಿದರು.


ಎರಡು ದಿನಗಳಾದ ನಂತರ ಯೇಸು ಅಲ್ಲಿಂದ ಗಲಿಲಾಯಕ್ಕೆ ಹೋದನು.


ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು