Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:46 - ಪರಿಶುದ್ದ ಬೈಬಲ್‌

46 ಯೇಸು ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಭೇಟಿ ನೀಡಿದನು. ಆತನು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು ಆ ಊರಿನಲ್ಲೇ. ರಾಜನ ಒಬ್ಬ ಅಧಿಕಾರಿಯು ಕಪೆರ್ನೌಮ್ ಪಟ್ಟಣದಲ್ಲಿ ವಾಸವಾಗಿದ್ದನು. ಅವನ ಮಗನಿಗೆ ಕಾಯಿಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಹೀಗಿರಲಾಗಿ ಯೇಸು, ತಾನು ನೀರನ್ನು ದ್ರಾಕ್ಷಾರಸವಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಮತ್ತೊಮ್ಮೆ ಬಂದನು. ಅಲ್ಲಿದ್ದಾಗ ಅರಮನೆಯ ಒಬ್ಬ ಪ್ರಧಾನನ ಮಗನು ಕಪೆರ್ನೌವಿುನಲ್ಲಿ ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಮಾನಾ ಜೆಜು ಅಪ್ನಿ ಪಾನಿ ಹೊತ್ತೆ ವಾಯ್ನ್ ಕರುನ್ ಬದ್ಲಲ್ಲ್ಯಾ ಗಾಲಿಲಿಯಾ ಪ್ರಾಂತ್ಯಾತ್ಲ್ಯಾ ಕಾನಾ ಮನ್ತಲ್ಯಾ ಗಾಂವಾಕ್ ಗೆಲೊ ಥೈ ಎಕ್ ಸರ್ಕಾರಾಚೊ ಮೊಟೊ ಅದಿಕಾರಿ ಹೊತ್ತೊ ತೆಚೊ ಲೆಕ್ ಶಿಕ್ ಹೊತ್ತೊ ತೊ ಲೆಕ್ ಕಫರ್ನವ್ ಮನ್ತಲ್ಯಾ ಗಾಂವಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:46
14 ತಿಳಿವುಗಳ ಹೋಲಿಕೆ  

ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.


ಅಲ್ಲಿ ಒಬ್ಬ ಸೇನಾಧಿಪತಿ ಇದ್ದನು. ಅವನ ಪ್ರಿಯ ಸೇವಕನೊಬ್ಬನು ಕಾಯಿಲೆಯಿಂದ ಸಾಯುವ ಸ್ಥಿತಿಯಲ್ಲಿದ್ದನು.


ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಕೆಲವು ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯಾರೆಂದರೆ, ಸೀಮೋನ್ ಪೇತ್ರ, ದಿದುಮನೆಂಬ ತೋಮ, ಗಲಿಲಾಯಕ್ಕೆ ಸೇರಿದ ಕಾನಾ ಊರಿನವನಾದ ನತಾನಿಯೇಲ, ಜೆಬೆದಾಯನ ಇಬ್ಬರು ಗಂಡುಮಕ್ಕಳು ಮತ್ತು ಇನ್ನಿಬ್ಬರು ಶಿಷ್ಯರು.


ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.


ಅಲ್ಲಿಂದ ಆ ಮೇರೆಯು ಎಬ್ರೋನ್, ರೆಹೋಬ್, ಹಮ್ಮೋನ್ ಮತ್ತು ಕಾನಾ ಇವುಗಳ ಮೂಲಕ ಚೀದೋನ್ ಎಂಬ ಮಹಾನಗರಕ್ಕೆ ತಲುಪಿತ್ತು.


ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’” ಎಂದು ಹೇಳಬೇಕೆಂದಿದ್ದೀರಿ.


ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು