Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:2 - ಪರಿಶುದ್ದ ಬೈಬಲ್‌

2 ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆರುಜಲೆಮಾತ್ ಬಕ್ರಿ ಇಕ್ತಲೊ ಎಕ್ ಜಾಗೊ ಹೊತ್ತೊ ತ್ಯಾ ವಾಟೆರ್ ಎಕ್ ಪಾಂಚ್ ಮಂಟಪಾಂಚೆ ತಳೆ ಹೊತ್ತೆ. ಜುದೆವ್ ಲೊಕಾ ಹ್ಯಾ ತಳ್ಯಾಕ್ ಬೆಥ್‍ಝತಾ ಮನುನ್ ಬಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:2
14 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.


ಎಲ್ಯಾಷೀಬನು ಮಹಾಯಾಜಕನಾಗಿದ್ದನು. ಅವನೂ ಮತ್ತು ಯಾಜಕರುಗಳಾಗಿದ್ದ ಅವನ ಸಹೋದರರೂ ಕುರಿ ಹೆಬ್ಬಾಗಿಲನ್ನು ಕಟ್ಟಿದರು. ನಂತರ ಪ್ರಾರ್ಥಿಸಿ ಯೆಹೋವನಿಗೆ ಅದನ್ನು ಪ್ರತಿಷ್ಠಿಸಿದರು. ಅವರು ಅದಕ್ಕೆ ಬಾಗಿಲುಗಳನ್ನು ಜೋಡಿಸಿದರು. ಆ ಯಾಜಕರು ನೂರುಗೋಪುರ ಮತ್ತು ಹನನೇಲ್ ಗೋಪುರದವರೆಗೂ ಜೆರುಸಲೇಮಿನ ಗೋಡೆಯನ್ನು ಕಟ್ಟಿದ್ದರು. ಅವರು ಪ್ರಾರ್ಥಿಸಿ ಯೆಹೋವನಿಗೆ ಪ್ರತಿಷ್ಠಿಸಿದರು.


ಅಕ್ಕಸಾಲಿಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣಿಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು.


ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.


ಯೇಸು ಆಕೆಗೆ, “ಮರಿಯಳೇ” ಎಂದನು. ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.)


ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)


ಯೆಹೂದ್ಯರು ಹೇಳಿದ್ದನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿ, “ಹಾಸುಗಲ್ಲು” ಎಂಬ ಕಟ್ಟೆಯ (ಯೆಹೂದ್ಯರ ಭಾಷೆ ಯಲ್ಲಿ ಅದರ ಹೆಸರು ಗಬ್ಬಥ.) ಮೇಲಿದ್ದ ನ್ಯಾಯಪೀಠದಲ್ಲಿ ಕುಳಿತುಕೊಂಡನು.


ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.


ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.


ಕೊಳದ ಬಳಿಯಲ್ಲಿದ್ದ ಮಂಟಪಗಳಲ್ಲಿ ಅನೇಕ ರೋಗಿಗಳು ಬಿದ್ದುಕೊಂಡಿರುತ್ತಿದ್ದರು. ಅವರಲ್ಲಿ ಕೆಲವರು ಕುರಡರಾಗಿದ್ದರು, ಕೆಲವರು ಕುಂಟರಾಗಿದ್ದರು, ಮತ್ತೆ ಕೆಲವರು, ಪಾರ್ಶ್ವವಾಯು ರೋಗಿಗಳಾಗಿದ್ದರು.


ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ.


ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.


ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು