Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:23 - ಪರಿಶುದ್ದ ಬೈಬಲ್‌

23 ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆಚ್ಯಾ ಸಾಟ್ನಿ ಸಗ್ಳೆ ಲೊಕಾ ಕವ್ಡೊ ಬಾಬಾಕ್ ಮಾನ್ ದಿತ್ಯಾತ್, ತವ್ಡೆಚ್ ಲೆಕಾಕ್ ಬಿ ಮಾನ್ ದಿತ್ಯಾತ್. ಜೆ ಕೊನ್ ಲೆಕಾಕ್ ಮಾನ್ ದಿ ನಾತ್, ತೆನಿ ತೆಕಾ ಧಾಡುನ್ ದಿಲ್ಲ್ಯಾ ಬಾಬಾಕ್‍ಬಿ ಮಾನ್ ದಿ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:23
47 ತಿಳಿವುಗಳ ಹೋಲಿಕೆ  

ಮಗನನ್ನು ನಂಬದೆ ಇರುವವನು ತಂದೆಯನ್ನು ಹೊಂದಿಲ್ಲ. ಆದರೆ ಮಗನನ್ನು ಸ್ವೀಕರಿಸಿಕೊಳ್ಳುವವನು ತಂದೆಯನ್ನು ಸಹ ಹೊಂದಿದ್ದಾನೆ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ.”


ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.


ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆಯಾಗಿ ದೇವರ ಗುಲಾಮರಾಗಿದ್ದೀರಿ. ಇದರಿಂದ ನಿಮಗೆ ಪರಿಶುದ್ಧ ಜೀವನವೂ ನಿತ್ಯಜೀವವೂ ದೊರೆಯುತ್ತವೆ.


ಸತ್ಯದ ಆತ್ಮನು ನನ್ನಿಂದಲೇ ವಿಷಯಗಳನ್ನು ತೆಗೆದುಕೊಂಡು ನಿಮಗೆ ತಿಳಿಸುವುದರ ಮೂಲಕ ನನ್ನನ್ನು ಮಹಿಮೆಪಡಿಸುವನು.


ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.


ಎಲ್ಲಾ ಜನರು ಆತನಲ್ಲಿ ಭರವಸೆ ಇಡುವರು.”


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.


ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.


“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.”


ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನನ್ನಲ್ಲಿರುವುದೆಲ್ಲಾ ನಿನ್ನದೇ ಮತ್ತು ನಿನ್ನಲ್ಲಿರುವುದೆಲ್ಲಾ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.


“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.


‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು