Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:27 - ಪರಿಶುದ್ದ ಬೈಬಲ್‌

27 ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಮಗನು ಮನುಷ್ಯಕುಮಾರನಾಗಿರುವದರಿಂದ ತೀರ್ಪುಮಾಡುವ ಅಧಿಕಾರವನ್ನೂ ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ತೆನಿ ಇಚಾರ್‍ನಿ ಕರ್‍ತಲೊ ಹಕ್ಕ್ ಲೆಕಾಕ್ ದಿಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್ ತೊ ಮಾನ್ಸಾಚೊ ಲೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:27
15 ತಿಳಿವುಗಳ ಹೋಲಿಕೆ  

“ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


“ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ.


ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.


ದೇವರು ಎಲ್ಲಾ ಶತ್ರುಗಳನ್ನು ಕ್ರಿಸ್ತನಿಗೆ ಅಧೀನಗೊಳಿಸುವ ತನಕ ಕ್ರಿಸ್ತನು ಆಳಲೇಬೇಕು.


ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.


ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು.


ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.


ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು