Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:44 - ಪರಿಶುದ್ದ ಬೈಬಲ್‌

44 ನೀವು ಪರಸ್ಪರ ಸನ್ಮಾನವನ್ನು ಬಯಸುತ್ತೀರಿ. ಆದರೆ ಒಬ್ಬನೇ ದೇವರಿಂದ ಬರುವ ಸನ್ಮಾನವನ್ನು ಪಡೆದುಕೊಳ್ಳಲು ನೀವೆಂದೂ ಪ್ರಯತ್ನಿಸುವುದಿಲ್ಲ. ಹೀಗಿರಲು ನೀವು ಹೇಗೆ ನಂಬಬಲ್ಲಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ದುಸ್ರ್ಯಾನಿಕ್ನಾ ಹೊಗ್ಳುನ್ ಘೆತಲೆ ತುಮ್ಕಾ ಬರೆ ದಿಸ್ತಾ. ಖರೆ ತುಮಿ ಎಕ್ಲ್ಯಾಚ್ ದೆವಾಕ್ನಾ ಹೊಗ್ಳುನ್ ಘೆವ್ಕ್ ಮನ್ ಕರಿನ್ಯಾಶಿ, ಅಶೆ ರ್‍ಹಾತಾನಾ ತುಮಿ ಮಾಜ್ಯಾ ಕಶೆ ವಿಶ್ವಾಸ್, ಕರುಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:44
26 ತಿಳಿವುಗಳ ಹೋಲಿಕೆ  

ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.


ಆದರೆ ದೇವರು ನನ್ನ ತಂದೆಗೆ, ‘ದಾವೀದನೇ, ನೀನು ನನಗಾಗಿ ಒಂದು ಆಲಯವನ್ನು ಕಟ್ಟಲು ಮನಸ್ಸು ಮಾಡಿರುವದು ಒಳ್ಳೆಯದೇ ಸರಿ!


ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.


ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.


“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.


ಜನರಿಂದ ಬರುವ ಮಾನಮರ್ಯಾದೆಗಳನ್ನು ನಿಮ್ಮಿಂದಾಗಲಿ ಇತರ ಜನರಿಂದಾಗಲಿ ನಾವೆಂದೂ ಬಯಸಲಿಲ್ಲ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು