Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:6 - ಪರಿಶುದ್ದ ಬೈಬಲ್‌

6 ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಪಡುನ್ ಹೊತ್ತ್ಯಾ ತ್ಯಾ ಮಾನ್ಸಾಕ್ ಜೆಜುನ್ ಬಗಟ್ಲ್ಯಾನ್, ಅನಿ ತೊ ಲೈ ದಿಸಾನಿಕ್ನಾ ಶಿಕ್ ಹೊತ್ತೊ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ಜೆಜುನ್ ತೆಕಾ “ತುಕಾ ಆರಾಮ್ ಹೊವ್ಕ್ ಮನ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:6
9 ತಿಳಿವುಗಳ ಹೋಲಿಕೆ  

ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


“ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಯೆಹೋವನು ಹೇಳುವುದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು.


ನನ್ನ ವೈರಿಗಳು ನನಗೆ ಉರುಲನ್ನು ಒಡ್ಡಿದ್ದಾರೆ. ನನ್ನ ಆತ್ಮವು ಕುಂದಿಹೋಗಿದೆ. ನನ್ನ ಮಾರ್ಗವನ್ನು ತಿಳಿದಿರುವಾತನು ನೀನೇ.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬನು ಅಲ್ಲಿ ಬಿದ್ದುಕೊಂಡಿದ್ದನು.


ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು