Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:15 - ಪರಿಶುದ್ದ ಬೈಬಲ್‌

15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾ ಬಳ್‍ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:15
14 ತಿಳಿವುಗಳ ಹೋಲಿಕೆ  

ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು.


ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.


ಆಗ ಯೇಸು ಬೆಟ್ಟವನ್ನು ಹತ್ತಿ ತನ್ನ ಶಿಷ್ಯರ ಸಂಗಡ ಕುಳಿತುಕೊಂಡನು.


ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.


ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು