Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:26 - ಪರಿಶುದ್ದ ಬೈಬಲ್‌

26 ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ, ತುಮಿ ಮಿಯಾ ಕರಲ್ಲಿ ಅಜಾಪಾ ಬಗುನ್ ನ್ಹಯ್ ತುಮಿ ಪೊಟ್‍ಬರ್ ಭಾಕ್ರಿಯಾ ಖಾಲ್ಯಾಶಿ ಮನುನ್ ಮಾಕಾ ಹುಡ್ಕುಕ್ ಲಾಗ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:26
20 ತಿಳಿವುಗಳ ಹೋಲಿಕೆ  

ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.


ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ.


ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?


ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.


ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ನಾನು ನಿಮಗೆ ಮೊದಲೇ ಹೇಳಿದಂತೆ, ನೀವು ನನ್ನನ್ನು ನೋಡಿದ್ದರೂ ಇನ್ನೂ ನನ್ನನ್ನು ನಂಬುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು