Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:30 - ಪರಿಶುದ್ದ ಬೈಬಲ್‌

30 ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಆತನನ್ನು - ಹಾಗಾದರೆ ನಾವು ನೋಡಿ ನಿನ್ನ ಮಾತನ್ನು ನಂಬುವಂತೆ ಏನು ಸೂಚಕಕಾರ್ಯ ಮಾಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಲೊಕಾ ತೆನಿ,“ಅಮಿ ಬಗುನ್ ತುಜೆ ವರ್ತಿ ವಿಶ್ವಾಸ್ ಕರಿ ಸರ್ಕೆ ಕಾಯ್ ಅಜಾಪ್ ಅಮ್ಕಾ ತಿಯಾ ಕರುನ್ ದಾಕ್ವುತೆಯ್? ಕಾಯ್ ಕಾಮ್ ಕರುನ್ ದಾಕ್ವುತೆ ತಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:30
22 ತಿಳಿವುಗಳ ಹೋಲಿಕೆ  

ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ.


ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.


ನಾನು ನಿಮಗೆ ಮೊದಲೇ ಹೇಳಿದಂತೆ, ನೀವು ನನ್ನನ್ನು ನೋಡಿದ್ದರೂ ಇನ್ನೂ ನನ್ನನ್ನು ನಂಬುತ್ತಿಲ್ಲ.


ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.


ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು.


ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.


ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.


ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.


ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ಯಜ್ಞವೇದಿಕೆಯೂ ಒಡೆದು ಚೂರಾಯಿತು. ಅದರ ಮೇಲಿನ ಬೂದಿಯು ನೆಲದ ಮೇಲೆ ಚೆಲ್ಲಿಹೋಯಿತು. ದೇವರೇ ಆಜ್ಞಾಪಿಸಿದನೆಂದು ದೇವಮನುಷ್ಯನು ಹೇಳಿದ ಸಂಗತಿಗಳಿಗೆ ಇದೇ ಗುರುತಾಗಿತ್ತು.


ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಞವೇದಿಕೆಯು ಒಡೆದುಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿಹೋಗುವುದು’” ಎಂದನು.


ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು.


(ಯೇಸುವಿನ ಶಿಷ್ಯರು ಆಹಾರಪದಾರ್ಥವನ್ನು ಕೊಂಡುಕೊಂಡು ಬರಲು ಪಟ್ಟಣದೊಳಗೆ ಹೋಗಿದ್ದಾಗ ಇದು ಸಂಭವಿಸಿತು.)


“ಫರೋಹನು ನಿಮಗೆ, ಅದ್ಭುತಕಾರ್ಯವೊಂದನ್ನು ಮಾಡಿ ನಿಮ್ಮ ಅಧಿಕಾರವನ್ನು ರುಜುವಾತುಪಡಿಸಬೇಕೆಂದು ಕೇಳುವನು. ಆಗ ಮೋಶೆಯು ಆರೋನನಿಗೆ ಊರುಗೋಲನ್ನು ನೆಲದ ಮೇಲೆ ಬಿಸಾಡಲು ಹೇಳಬೇಕು. ಆರೋನನು ಬಿಸಾಡಿದ ಕೂಡಲೇ ಆ ಕೋಲು ಅವರ ಕಣ್ಣೆದುರಿನಲ್ಲಿಯೇ ಸರ್ಪವಾಗುವುದು” ಅಂದನು.


ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.


ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು