Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:53 - ಪರಿಶುದ್ದ ಬೈಬಲ್‌

53 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ತುಮಿ ಮಾನ್ಸಾಚ್ಯಾಲೆಕಾಚೆ ಶರಿರ್ ಖಾಯ್ನಸ್ಲ್ಯಾರ್, ಅನಿ ರಗಾತ್ ಫಿ ನಸ್ಲ್ಯಾರ್ ತುಮ್ಚ್ಯಾ ಭುತ್ತುರ್ ಜಿವುಚ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:53
19 ತಿಳಿವುಗಳ ಹೋಲಿಕೆ  

ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ.


ನನ್ನ ದೇಹವು ನಿಜವಾದ ಆಹಾರವಾಗಿದೆ. ನನ್ನ ರಕ್ತವು ನಿಜವಾದ ಪಾನೀಯವಾಗಿದೆ.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.


ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!


ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ” ಎಂದು ಹೇಳಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.


ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.


ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು