Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:28 - ಪರಿಶುದ್ದ ಬೈಬಲ್‌

28 ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಜೆಜು ದೆವಾಚ್ಯಾ ಗುಡಿತ್ ಶಿಕ್ವುತಾನಾ ಜೆಜುನ್ ಮೊಟ್ಯಾ ಅವಾಜಾನ್, ಮಿಯಾ ಕೊನ್ ಅನಿ ಖೈತ್ನಾ ಯೆಲಾ ಮನುನ್ ತುಮ್ಕಾ ಖರೆಚ್! ಗೊತ್ತ್ ಹಾಯ್ ಕಾಯ್? ಮಿಯಾ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆವ್ಕ್ ನಾ. ಮಾಕಾ ಧಾಡುನ್ ದಿಲ್ಲೊ ಖರೊ ಮಾನುಸ್. ತುಮಿ ತೆಕಾ ವಳ್ಕಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:28
46 ತಿಳಿವುಗಳ ಹೋಲಿಕೆ  

ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು.


ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದಿರುವಿರಿ” ಎಂದು ಹೇಳಿದನು.


ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.


ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ.


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ.


ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನಾನು ಆತನಿಗೋಸ್ಕರ ಮಾತಾಡುತ್ತೇನೆ. ಆದರೆ ನೀವು ನನ್ನನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಮತ್ತೊಬ್ಬನು ಬಂದು ತನಗೋಸ್ಕರವಾಗಿ ಮಾತಾಡಿದರೆ ನೀವು ಅವನನ್ನು ಸ್ವೀಕರಿಸಿಕೊಳ್ಳುತ್ತೀರಿ.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ.


ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ.


ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.”


ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.


ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?


ನಾನು ಮಾಡುವ ತೀರ್ಪು ನ್ಯಾಯಬದ್ಧವಾಗಿರುತ್ತದೆ. ಏಕೆಂದರೆ ನಾನು ತೀರ್ಪು ಮಾಡುವಾಗ ಒಬ್ಬಂಟಿಗನಾಗಿರುವುದಿಲ್ಲ. ನನ್ನನ್ನು ಕಳುಹಿಸಿದ ತಂದೆಯೂ ನನ್ನೊಂದಿಗಿರುತ್ತಾನೆ.


ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.


ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.


ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು.


ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.


“ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”


ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.


ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.


ನಜರೇತ್ ಎಂಬ ಊರಲ್ಲಿ ವಾಸಿಸಿದನು. “ಕ್ರಿಸ್ತನನ್ನು ‘ನಜರೇತಿನವನು’ ಎಂದು ಕರೆಯುತ್ತಾರೆ” ಎಂದು ದೇವರು ಪ್ರವಾದಿಗಳ ಮೂಲಕ ಹೇಳಿದ್ದು ಹೀಗೆ ನೆರವೇರಿತು.


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಹಬ್ಬದಲ್ಲಿ ಸುಮಾರು ಅರ್ಧಭಾಗ ಮುಗಿದುಹೋಗಿತ್ತು. ಆಗ ಯೇಸು ದೇವಾಲಯಕ್ಕೆ ಹೋಗಿ ಉಪದೇಶಿಸಲು ಆರಂಭಿಸಿದನು.


ನಂತರ ಯೇಸು ಆ ಜನರಿಗೆ, “ನೀವು ಅಪರಾಧಿಯನ್ನು ಬಂಧಿಸುವವರಂತೆ ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದಿದ್ದೀರಿ. ನಾನು ಪ್ರತಿದಿನವೂ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಅಲ್ಲಿ ಬಂಧಿಸಲೇ ಇಲ್ಲ.


ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.


ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು