Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:48 - ಪರಿಶುದ್ದ ಬೈಬಲ್‌

48 ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಹಿರೀಸಭೆಯವರಲ್ಲಿಯಾಗಲಿ ಫರಿಸಾಯರಲ್ಲಿಯಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 “ಕನ್ನಾಬಿ ತುಮ್ಕಾ ಅದಿಕಾರ್‍ಯಾನಿತ್ಲೊ ಎಕ್ಲೊ ನಾ ಹೊಲ್ಯಾರ್ ಫಾರಿಜೆವಾನಿತ್ಲೊ ಎಕ್ಲೊ ತೆಚೆವರ್ತಿ ವಿಶ್ವಾಸ್ ಕರ್‍ತಾ ಮನುನ್ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:48
12 ತಿಳಿವುಗಳ ಹೋಲಿಕೆ  

ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.


ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.


ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


ಆದರೆ ಆ ಗುಂಪಿನಲ್ಲಿ ನಿಕೊದೇಮನು ಇದ್ದನು. ಮೊದಲೊಮ್ಮೆ ಯೇಸುವನ್ನು ನೋಡಲು ಹೋಗಿದ್ದವನು ಇವನೇ.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಪಿಲಾತನು ಮಹಾಯಾಜಕರನ್ನೂ ಯೆಹೂದ್ಯನಾಯಕರನ್ನೂ ಇತರ ಜನರನ್ನೂ ಒಟ್ಟಾಗಿ ಕರೆಸಿ,


ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು.


ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು