Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:15 - ಪರಿಶುದ್ದ ಬೈಬಲ್‌

15 ನೀವು ಹೊರತೋರಿಕೆಯ ಪ್ರಕಾರ ತೀರ್ಪು ಮಾಡುತ್ತಿದ್ದೀರಿ. ಆದರೆ ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಹೊರಗಿನ ತೋರಿಕೆಯ ಪ್ರಕಾರ ತೀರ್ಪುಮಾಡುವವರು; ನಾನು ಯಾವನಿಗೂ ತೀರ್ಪುಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಮಾನ್ಸಾನಿ ಕರ್‍ಲ್ಯಾ ಸರ್ಕೆ ಇಚಾರ್‍ನಿ ಕರ್‍ತ್ಯಾಶಿ, ಮಿಯಾ ಕೊನಾಚೆಬಿ ಇಚಾರ್‍ನಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:15
17 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.


ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.


ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.


ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.


ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.


“ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ.


ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.


ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.


ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.


ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು