Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ಜುದೆವಾಂಚ್ಯಾ “ಹ್ಯೊ, ತೊ ಜಾತಾ ಥೈ ಅಮ್ಚ್ಯಾನ್ ಜಾವ್ಕ್ ಹೊಯ್ನಾ ಮನುನ್ ಮನುಲಾ, ಅಶೆ ಮಟ್ಲ್ಯಾರ್ ಹ್ಯೊ ಅಪ್ನಾಚೊಚ್ ಜಿವ್ ಕಾಡುನ್ ಘೆಟ್ನಾರ್ ಹಾಯ್ ಕಿ ಕಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:22
11 ತಿಳಿವುಗಳ ಹೋಲಿಕೆ  

ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.


ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ; ಅವರು ನನ್ನನ್ನು ತಿರಸ್ಕರಿಸುತ್ತಾರೆ.


ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.


ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.


ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.


ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


“ನೀನು ಯಾರು?” ಎಂದು ಯೋಹಾನನನ್ನು ಕೇಳುವುದಕ್ಕಾಗಿ ಜೆರುಸಲೇಮಿನ ಯೆಹೂದ್ಯರು ಯೋಹಾನನ ಬಳಿಗೆ ಕೆಲವು ಯಾಜಕರನ್ನು ಮತ್ತು ಲೇವಿಯರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು