Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:47 - ಪರಿಶುದ್ದ ಬೈಬಲ್‌

47 ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಜೆ ಕೊನ್ ದೆವಾಕ್ನಾ ಯೆತಾ ತೊ ದೆವಾಚ್ಯಾ ಗೊಸ್ಟಿಯಾ ಆಯಿಕ್ತಾ. ತುಮಿ ದೆವಾಕ್‍ ಸಮಂದ್ ಪಡಲ್ಲೆ ನ್ಹಯ್, ತಸೆಮನುನ್ ತುಮಿ ಮಾಜಿ ಗೊಸ್ಟಿಯಾ ಆಯ್ಕಿನ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:47
17 ತಿಳಿವುಗಳ ಹೋಲಿಕೆ  

ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.


ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


“ನಾನು ಸತ್ಯವನ್ನು ಹೇಳುತ್ತೇನೆ. ಆದರೆ ನೀವು ನನ್ನನ್ನು ನಂಬುವುದಿಲ್ಲ.


ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.


ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.


ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.


ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.


ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.


ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು