Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:54 - ಪರಿಶುದ್ದ ಬೈಬಲ್‌

54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತನ್ನಾ ಜೆಜುನ್, “ಮಿಯಾ ಮಾಕಾಚ್ ಮರ್‍ಯಾದ್ ಗಾವುಚಿ ಮನುನ್ ಬಗುಲಾ ಹೊಲ್ಯಾರ್, ತ್ಯಾ ಮರ್‍ಯಾದಿಕ್ ಕಾಯ್ಬಿ ಕಿಮ್ಮತ್ ನಾ. ಮಾಜೊ ಬಾಬಾಚ್ ಮಾಕಾ ಮರ್‍ಯಾದ್ ಗಾವಿ ಸರ್ಕೆ ಕರ್‍ತಾ ತೆಕಾ ತುಮಿ ತುಮ್ಚೊ ದೆವ್ ಮನುನ್ ಮನ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:54
28 ತಿಳಿವುಗಳ ಹೋಲಿಕೆ  

ನನಗಾಗಿ ಗೌರವವನ್ನು ಪಡೆದುಕೊಳ್ಳಲು ನಾನು ಪ್ರಯತ್ನಿಸುತ್ತಿಲ್ಲ. ನನಗೆ ಗೌರವ ದೊರೆಯಬೇಕೆಂದು ಬಯಸುವ ಒಬ್ಬಾತನಿದ್ದಾನೆ. ಆತನೇ ನ್ಯಾಯಾಧಿಪತಿ.


ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ.


ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.


ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.


ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು.


ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.


ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.


ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು