Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:7 - ಪರಿಶುದ್ದ ಬೈಬಲ್‌

7 ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಪರಸ್ನೆ ಇಚಾರುಂಗೆತ್ ಇಬೆ ಹೊತ್ತೆ, ತನ್ನಾ ತೊ ನಿಟ್ ಇಬೆ ರ್‍ಹಾಲೊ ಅನಿ ತೆಂಕಾ, “ತುಮ್ಚ್ಯಾತ್ಲೊ ಕೊನ್ ಪಾಪ್ ಕರುಕ್ನಾ ತೊ ಅದ್ದಿ ತಿಕಾ ಗುಂಡೊ ಮಾರುಂದಿ” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:7
18 ತಿಳಿವುಗಳ ಹೋಲಿಕೆ  

ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.


ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ದೇವಾಲಯದ ಸಿಪಾಯಿಗಳು, “ಈತನಂತೆ ಆಶ್ಚರ್ಯಕರವಾದ ಸಂಗತಿಗಳನ್ನು ಬೇರೆ ಯಾರೂ ಹೇಳಿಲ್ಲ” ಎಂದು ಉತ್ತರಕೊಟ್ಟರು.


ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ಮತ್ತೆ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದನು.


ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು