Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:9 - ಪರಿಶುದ್ದ ಬೈಬಲ್‌

9 ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಶೆಚ್ ಹೆ ಆಯ್ಕಲ್ಲ್ಯಾ ತನ್ನಾ ತೆನಿ ಮ್ಹಾತಾರ್‍ಯಾಕ್ನಾ ಧರುನ್ ಹರೆಕ್ಲೊ ಎಕೆಕ್ಲೆಚ್ ಸಗ್ಳಿ ಲೊಕಾ ಗೆಲೆ ಥೈ ಇಬೆ ಹೊತ್ತ್ಯಾ ಬಾಯ್ಕೊಮನ್ಸಿಚ್ಯಾ ವಾಂಗ್ಡಾ ಜೆಜು ಎಕ್ಲೊಚ್ ಹುರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:9
22 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ.


ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.


ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.


ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಸಂಪೂರ್ಣವಾಗಿ ನಾಶಮಾಡು! ನನಗೆ ಕೇಡುಮಾಡಬೇಕೆಂದಿರುವ ಅವರಿಗೆ ನಾಚಿಕೆಯೂ ಅವಮಾನವೂ ಆವರಿಸಿಕೊಳ್ಳಲಿ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!


ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!


ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ. ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತದೆ.


ಆ ಸ್ತ್ರೀಯು ಎಲೀಯನಿಗೆ, “ನೀನು ದೇವಮನುಷ್ಯ. ನೀನು ನನಗೆ ಸಹಾಯಮಾಡಲು ಬಂದಿರುವೆಯಾ? ಅಥವಾ ನನ್ನ ಪಾಪಗಳನ್ನೆಲ್ಲ ನನ್ನ ನೆನಪಿಗೆ ತಂದುಕೊಳ್ಳುವಂತೆ ಮಾಡಲು, ನನ್ನ ಮಗನಿಗೆ ಸಾವನ್ನು ಉಂಟುಮಾಡುವುದಕ್ಕಾಗಿಯೇ ಬಂದಿರುವೆಯಾ?” ಎಂದು ಕೇಳಿದಳು.


ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.


ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದುಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು.


ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ,


ಮತ್ತೆ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು