Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:35 - ಪರಿಶುದ್ದ ಬೈಬಲ್‌

35 ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು - ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಹಿತ್ತೆ ಕಾಯ್-ಕಾಯ್ ಹೊಲೆ ಮನ್ತಲಿ ಖಬರ್ ಜೆಜುಕ್ ಗಾವ್ಲಿ, ಮಾನಾ ತೊ ಮಾನುಸ್ ಜೆಜುಕ್ ಭೆಟ್ಲೊ, ತನ್ನಾ ಜೆಜುನ್ ತೆಕಾ,“ಮಾನ್ಸಾಚ್ಯಾಲೆಕಾ ವರ್ತಿ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:35
32 ತಿಳಿವುಗಳ ಹೋಲಿಕೆ  

ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.


ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


ಲೋಕದ ವಿರುದ್ಧ ಜಯಗಳಿಸಿದ್ದು ನಮ್ಮ ನಂಬಿಕೆಯೇ. ಆದ್ದರಿಂದ ಲೋಕದ ವಿರುದ್ಧ ಜಯಗಳಿಸುವವನು ಯಾರು? ಯೇಸುವನ್ನು ದೇವರ ಮಗನೆಂದು ನಂಬುವ ವ್ಯಕ್ತಿಯು ಮಾತ್ರ ಜಯಗಳಿಸುತ್ತಾನೆ.


“ಯೇಸುವೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದು ಹೇಳುವವನಲ್ಲಿ ದೇವರು ನೆಲೆಸಿದ್ದಾನೆ ಮತ್ತು ಅವನು ದೇವರಲ್ಲಿ ನೆಲೆಸಿದ್ದಾನೆ.


ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”


ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.


ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.


ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು.


ಆದ್ದರಿಂದ ಆತನೇ (ಯೇಸುವೇ) ದೇವರ ಮಗನೆಂದು ನಾನು ಜನರಿಗೆ ತಿಳಿಸುವೆನು” ಎಂದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.


ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.


ಆಗ ಆತನನ್ನು ಶೋಧಿಸಲು ಸೈತಾನನು ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞಾಪಿಸು” ಅಂದನು.


ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು