Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:10 - ಪರಿಶುದ್ದ ಬೈಬಲ್‌

10 ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:10
19 ತಿಳಿವುಗಳ ಹೋಲಿಕೆ  

ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದ ಬೇಗನೆ ಇಳಿದು ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದಳು.


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.


ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.


ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ!


ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.


ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.


ನೀವು ಈ ರಾಜ್ಯವನ್ನು ಪಡೆದುಕೊಳ್ಳಿರಿ. ಏಕೆಂದರೆ ನಾನು ಹಸಿದಿದ್ದೆನು. ನೀವು ನನಗೆ ಊಟ ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಒಬ್ಬಂಟಿಗನಾಗಿ ಮನೆಯಿಂದ ದೂರದಲ್ಲಿ ಇದ್ದಾಗ, ನೀವು ನನ್ನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಂಡಿರಿ.


ಒಂದು ದಿನ ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಗಳಿಗೆ ಹೋಗುತ್ತೇನೆ. ಯಾರಾದರೂ ದಯೆತೋರಿ ತಮ್ಮ ಹೊಲದಲ್ಲಿ ಹಕ್ಕಲನ್ನು ಆರಿಸಲು ಅನುಮತಿ ಕೊಡಬಹುದು” ಎಂದಳು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.


ಬೋವಜನು ಅವಳಿಗೆ, “ನೀನು ನಿನ್ನ ಅತ್ತೆಯಾದ ನೊವೊಮಿಗೆ ಮಾಡಿದ ಎಲ್ಲ ಸಹಾಯದ ಬಗ್ಗೆ ನನಗೆ ಗೊತ್ತಿದೆ. ನಿನ್ನ ಗಂಡನು ಸತ್ತ ಮೇಲೆಯೂ ನೀನು ಅವಳಿಗೆ ಸಹಾಯ ಮಾಡಿದೆ ಎಂಬುದು ನನಗೆ ಗೊತ್ತಿದೆ. ನೀನು ನಿನ್ನ ತಂದೆತಾಯಿಗಳನ್ನೂ ನಿನ್ನ ದೇಶವನ್ನೂ ಬಿಟ್ಟು ಈ ದೇಶಕ್ಕೆ ಬಂದಿರುವಿ ಎಂಬುದು ನನಗೆ ಗೊತ್ತು. ನಿನಗೆ ಈ ದೇಶದಲ್ಲಿ ಯಾರ ಪರಿಚಯವೂ ಇರಲಿಲ್ಲ; ಆದರೂ ನೀನು ನೊವೊಮಿಯ ಜೊತೆ ಇಲ್ಲಿಗೆ ಬಂದಿರುವಿ.


ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲಿಂದ ಶೇಖರಿಸಿದೆ? ನೀನು ಎಲ್ಲಿ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು. ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದೆನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು.


ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು