Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:14 - ಪರಿಶುದ್ದ ಬೈಬಲ್‌

14 ಊಟದ ಸಮಯದಲ್ಲಿ ಬೋವಜನು ರೂತಳಿಗೆ, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ಹುಳಿರಸದಲ್ಲಿ ಅದ್ದಿಕೊಂಡು ತಿನ್ನು” ಎಂದು ಹೇಳಿದನು. ರೂತಳು ಕೆಲಸಗಾರರ ಜೊತೆ ಕುಳಿತುಕೊಂಡಳು. ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ರೂತಳು ಹೊಟ್ಟೆತುಂಬ ಊಟ ಮಾಡಿದ ಮೇಲೂ ಸ್ವಲ್ಪ ಆಹಾರ ಉಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಊಟದ ವೇಳೆಯಾದಾಗ ಬೋವಜನು - ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು ಎಂದು ಕರೆಯಲು ಆಕೆಯು ಹೋಗಿ ಕೊಯ್ಯುವವರ ಬಳಿಯಲ್ಲಿ ಕೂತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:14
17 ತಿಳಿವುಗಳ ಹೋಲಿಕೆ  

ರೂತಳು ತನ್ನ ಅತ್ತೆಗೆ ತೋರಿಸುವುದಕ್ಕಾಗಿ ಆ ಧಾನ್ಯವನ್ನು ಪಟ್ಟಣಕ್ಕೆ ತೆಗೆದುಕೊಂಡು ಹೋದಳು. ಇದಲ್ಲದೆ ತಾನು ಮಧ್ಯಾಹ್ನ ಊಟ ಮಾಡುವಾಗ ತೆಗೆದಿಟ್ಟ ಆಹಾರವನ್ನು ಸಹ ಅವಳಿಗೆ ಕೊಟ್ಟಳು.


ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.


ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.


ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು.


ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.


ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಬೇಯಿಸಿದ ಮೂವತ್ತು ಸೇರು ಕಾಳುಗಳನ್ನು ಮತ್ತು ಹತ್ತು ರೊಟ್ಟಿಗಳನ್ನು ಸೈನ್ಯದಲ್ಲಿರುವ ನಿನ್ನ ಸಹೋದರರಿಗಾಗಿ ತೆಗೆದುಕೊಂಡು ಹೋಗು.


ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


ಆಗ ರೂತಳು ಎದ್ದು ಪುನಃ ಕೆಲಸಕ್ಕೆ ಹೋದಳು. ಆಗ ಬೋವಜನು ತನ್ನ ಸೇವಕರಿಗೆ, “ರೂತಳು ಕಣದಲ್ಲಿರುವ ಸಿವುಡುಗಳ ಸುತ್ತಲೂ ಹಕ್ಕಲು ಆರಿಸಿಕೊಳ್ಳಲಿ; ಅವಳನ್ನು ತಡೆಯಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು