Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:8 - ಪರಿಶುದ್ದ ಬೈಬಲ್‌

8 ಆಗ ಬೋವಜನು ರೂತಳಿಗೆ, “ಮಗಳೇ, ನೀನು ನನ್ನ ಹೊಲದಲ್ಲಿಯೇ ಧಾನ್ಯವನ್ನು ಶೇಖರಿಸು. ನೀನು ಬೇರೆಯವರ ಹೊಲಕ್ಕೆ ಹೋಗುವ ಅವಶ್ಯಕತೆಯಿಲ್ಲ. ನನ್ನ ಹೆಣ್ಣಾಳುಗಳ ಹಿಂದೆಯೇ ನೀನು ಹೋಗುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಬೋವಜನು ರೂತಳಿಗೆ - ನನ್ನ ಮಗಳೇ, ಕೇಳು; ನನ್ನ ಹೊಲವನ್ನು ಬಿಟ್ಟು ಬೇರೆಯವರ ಹೊಲಕ್ಕೆ ಹೋಗಬೇಡ; ನನ್ನ ಹೆಣ್ಣಾಳುಗಳ ಜೊತೆಯಲ್ಲೇ ಇದ್ದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:8
11 ತಿಳಿವುಗಳ ಹೋಲಿಕೆ  

ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.


ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.


ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.


ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಆದರೆ ಏಲಿಯು, “ಸಮುವೇಲನೇ, ನನ್ನ ಮಗನೇ” ಎಂದು ಕರೆದನು. ಸಮುವೇಲನು, “ಇಗೋ, ಇದ್ದೇನೆ” ಅಂದನು.


ನಂತರ ಯೆಹೋವನು, “ಸಮುವೇಲನೇ” ಎಂದು ಮತ್ತೆ ಕರೆದನು. ಸಮುವೇಲನು ಮತ್ತೆ ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ” ಎಂದು ಹೇಳಿದನು. ಏಲಿಯು, “ನಾನು ನಿನ್ನನ್ನು ಕರೆಯಲಿಲ್ಲ, ಹೋಗಿ ಮಲಗಿಕೋ” ಅಂದನು.


ಅವಳು ಇಂದು ಬೆಳಗಿನ ಜಾವದಲ್ಲಿ ಬಂದು, ಕೊಯ್ಯುವವರ ಹಿಂದೆ ಹೋಗಿ ಹಕ್ಕಲಾರಿಸಿಕೊಳ್ಳಬಹುದೇ? ಎಂದು ನನ್ನನ್ನು ಕೇಳಿದಳು. ಆಗಿನಿಂದ ಅವಳು ಆ ಕೆಲಸವನ್ನು ಮಾಡುತ್ತಿದ್ದಾಳೆ. ಆಕೆ ಸ್ವಲ್ಪ ಹೊತ್ತು ಮಾತ್ರ ಆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡಳು” ಎಂದು ಉತ್ತರಕೊಟ್ಟನು.


ಅವರು ಯಾವ ಹೊಲಕ್ಕೆ ಹೋಗುತ್ತಾರೆಂಬುದನ್ನು ತಿಳಿದುಕೊಂಡು ಅವರನ್ನು ಹಿಂಬಾಲಿಸು; ನಿನಗೆ ತೊಂದರೆ ಕೊಡಕೂಡದೆಂದು ನನ್ನ ಸೇವಕರಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ನೀರಿನ ಕೊಡಗಳ ಬಳಿಗೆ ಹೋಗಿ ನನ್ನ ಆಳುಗಳು ಸೇದುವ ನೀರನ್ನೇ ಕುಡಿ” ಎಂದು ಹೇಳಿದನು.


“ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು