Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 4:14 - ಪರಿಶುದ್ದ ಬೈಬಲ್‌

14 ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಇವನು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಹೆಂಗಸರು ನೊವೊವಿುಗೆ - ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಹೆಸರು ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಸ್ತ್ರೀಯರು ನೊವೊಮಿಗೆ, “ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 4:14
13 ತಿಳಿವುಗಳ ಹೋಲಿಕೆ  

ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.


ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.


ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಚಿತ್ತ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ನಂತರ ಲೇಯಾ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಲೇಯಳು ತನ್ನೊಳಗೆ, “ಈಗ ನಾನು ಯೆಹೋವನನ್ನು ಸ್ತುತಿಸುವೆನು” ಎಂದು ಹೇಳಿ ಆ ಮಗುವಿಗೆ ಯೆಹೂದ ಎಂದು ಹೆಸರಿಟ್ಟಳು. ನಂತರ ಲೇಯಳಿಗೆ ಮಕ್ಕಳಾಗುವುದು ನಿಂತುಹೋಯಿತು.


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು