Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:16 - ಪರಿಶುದ್ದ ಬೈಬಲ್‌

16 ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” ಎಂದು ಯೆಶಾಯ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಸಗ್ಳೆ ಜಾನಾನಿ ಬರಿ ಖಬರ್ ಸ್ವಿಕಾರ್ ಕರುಕ್‍ನ್ಯಾತ್. ಇಸಾಯಿಯಾ ಅಪ್ನಿಚ್ ಮನ್ತಾ, “ಸರ್ವೆಸ್ವರಾ ಅಮ್ಚ್ಯಾ ಬಾತ್ಮಿ ವರ್‍ತಿ ಕೊನ್ ವಿಶ್ವಾಸ್ ಕರ್‍ಲ್ಯಾನಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:16
21 ತಿಳಿವುಗಳ ಹೋಲಿಕೆ  

ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಯೆಹೋವನ ದಂಡನೆಯನ್ನು ನಿಜವಾಗಿಯೂ ಸ್ವೀಕರಿಸಿಕೊಂಡವರು ಯಾರು?


ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?


ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು?


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.


ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ.


ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ.


ಆದರೆ ರಹಸ್ಯವಾದ ಆ ಸತ್ಯವನ್ನು ಈಗ ನಮಗೆ ತೋರಿಸಲಾಗಿದೆ. ಮತ್ತು ಆ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಆಜ್ಞಾಪಿಸಿರುವುದು ಇದನ್ನೇ. ಎಲ್ಲಾ ಜನರು ನಂಬಿಕೊಂಡು ದೇವರಿಗೆ ವಿಧೇಯರಾಗಲೆಂದು ರಹಸ್ಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲಾಗಿದೆ. ದೇವರು ಸದಾಕಾಲ ಜೀವಿಸುತ್ತಾನೆ.


ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.


ಆದರೆ ನೀವು ನಂಬುವುದಿಲ್ಲ. ಏಕೆಂದರೆ ನೀವು ನನ್ನ ಕುರಿಗಳಲ್ಲ (ಜನರಲ್ಲ).


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು