Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:3 - ಪರಿಶುದ್ದ ಬೈಬಲ್‌

3 ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವ್ ಖಲ್ಯಾ ರಿತಿನ್ ಲೊಕಾಕ್ನಿ ಅಪ್ನಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆತಾ ಮನ್ತಲೆ ತೆಂಕಾ ಗೊತ್ತ್ ನತ್ತೆ, ಹೆಚ್ಯಾ ಬದ್ಲಾಕ್, ತೆನಿ ತೆಂಚ್ಯಾ ವಾಟಾಚ್ ಸಮಾ ಕರುಕ್ ಬಗಟ್ಲ್ಯಾನಿ, ಅನಿ ಹೆಕಾ ಲಾಗುನ್ ತೆನಿ ದೆವಾನ್ ಲೊಕಾಕ್ನಿ ಖರ್ಯಾ ವಾಟೆನ್ ಚಲ್ತಲಿ ಮನುನ್ ಥವ್ತಲ್ಯಾ ವಾಟೆಕ್ ತೆಂಕಾಚ್ ಒಪ್ಸುನ್ ದಿವ್ಕ್ ನ್ಯಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:3
34 ತಿಳಿವುಗಳ ಹೋಲಿಕೆ  

ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಒಬ್ಬನು ದೇವರಿಗೆ ಅವಿಧೇಯನಾದ್ದರಿಂದ ಎಲ್ಲಾ ಜನರು ಪಾಪಿಗಳಾದರು. ಆದರೆ ಅದೇ ರೀತಿಯಲ್ಲಿ, ಒಬ್ಬನು ದೇವರಿಗೆ ವಿಧೇಯನಾದ್ದರಿಂದ ಎಲ್ಲರೂ ನೀತಿವಂತರಾಗುವರು.


ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.


ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.”


ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.


ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.


ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.


ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’


“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.


ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.


ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”


ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು