Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:5 - ಪರಿಶುದ್ದ ಬೈಬಲ್‌

5 ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಧರ್ಮಶಾಸ್ತ್ರ ಪಾಲನೆಯಿಂದ ಲಭಿಸುವ ಸತ್ಸಂಬಂಧದ ಬಗ್ಗೆ ಮೋಶೆ ಹೀಗೆ ಬರೆದಿದ್ದಾನೆ: “ಧರ್ಮಶಾಸ್ತ್ರದ ನೇಮನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮೊಯ್ಜೆನ್ ಖಾಯ್ದ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ಖರ್ಯಾ ವಾಟೆನ್ ಚಲ್ತಲಿ ದೆವಾಚಿ ಲೊಕಾ ಮನುನ್ ಸಾಂಗ್ತಲ್ಯಾಚ್ಯಾ ವಿಶಯಾತ್ ಅಶೆ ಲಿವ್ಲ್ಯಾನಾಯ್; “ಜೊ ಕೊನ್ ಖಾಯ್ದ್ಯಾನಿತ್ಲೊ ಹುಕುಮ್ ಪಾಳ್ತಾ ತೊ ಝಿತ್ತೊ ರ್‍ಹಾತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:5
11 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯರಾಗಬೇಕು. ಒಬ್ಬನು ನನ್ನ ಕಟ್ಟಳೆಗಳಿಗೆ ಮತ್ತು ನಿಯಮಗಳಿಗೆ ವಿಧೇಯನಾದರೆ, ಅವನು ಜೀವಿಸುವನು! ನಾನೇ ಯೆಹೋವನು!


ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆಹೋದರು.


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ಅಲ್ಲಿ ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟೆನು. ನನ್ನ ವಿಧಿನಿಯಮಗಳನ್ನು ತಿಳಿಸಿದೆನು. ಅವುಗಳನ್ನು ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.


ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ.


ನಾನು ಪಾಪದ ನಿಮಿತ್ತ ಆತ್ಮಿಕವಾಗಿ ಸತ್ತುಹೋದೆನು. ಜೀವವನ್ನು ತರಬೇಕಾಗಿದ್ದ ಆಜ್ಞೆಯೇ ನನಗೆ ಮರಣವನ್ನು ತಂದಿತು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು