Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:1 - ಪರಿಶುದ್ದ ಬೈಬಲ್‌

1 ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ದೆವಾನ್ ಅಪ್ನಾಚ್ಯಾ ಲೊಕಾಂಚೊ ತಿರಸ್ಕಾರ್ ಕರ್‍ಲ್ಯಾನ್ ಕಾಯ್? ಕನ್ನಾಚ್ ನಾ! ಮಿಯಾ ಸ್ವತಾಚ್ ಎಕ್ ಇಸ್ರಾಯೆಲಾಚೊ, ಮಾನುಸ್, ಅಬ್ರಾಹಾಮಾಚ್ಯಾ ಘರಾನ್ಯಾಚೊ ಮಾನುಸ್ ಬೆಂಜಾಮಿನಾಚ್ಯಾ ಕುಳಿಚೊ ಮಾನುಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:1
17 ತಿಳಿವುಗಳ ಹೋಲಿಕೆ  

ಆ ಜನರು ಇಬ್ರಿಯರೇ? ನಾನು ಸಹ ಇಬ್ರಿಯನು. ಅವರು ಇಸ್ರೇಲರೇ? ನಾನು ಸಹ ಇಸ್ರೇಲನು. ಅವರು ಅಬ್ರಹಾಮನ ಕುಟುಂಬಕ್ಕೆ ಸೇರಿದವರೇ? ನಾನು ಸಹ ಅಬ್ರಹಾಮನ ಕುಟುಂಬಕ್ಕೆ ಸೇರಿದವನು.


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;


“ನನ್ನ ಇಡೀ ಜೀವಮಾನದ ಬಗ್ಗೆ ಎಲ್ಲಾ ಯೆಹೂದ್ಯರಿಗೆ ಗೊತ್ತಿದೆ. ನಾನು ಆರಂಭದಿಂದ ನನ್ನ ಸ್ವದೇಶದಲ್ಲಿಯೂ ಅನಂತರ ಜೆರುಸಲೇಮಿನಲ್ಲಿಯೂ ಜೀವಿಸಿದ ರೀತಿಯನ್ನು ಅವರು ಬಲ್ಲರು.


ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.


ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.


ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?


ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.


ಹಾಗಾದರೆ, ಯೆಹೂದ್ಯರು ಮೇಲೇಳದಂತೆ ಮುಗ್ಗರಿಸಿ ಬಿದ್ದರೇ? ಎಂದಿಗೂ ಇಲ್ಲ. ಆದರೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆಪಡುವಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು