Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:22 - ಪರಿಶುದ್ದ ಬೈಬಲ್‌

22 ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿತ್ತೆ ಅಮ್ಕಾ ದೆವಾಚಿ ದಯಾ ಕಶಿ ಹಾಯ್, ತೆಚೆ ಕಟೊರ್‍ಪಾನ್‍ಬಿ ಕಶೆ ಹಾಯ್ ಮನುನ್ ದಿಸುನ್ ಯೆತಾ. ವಿಶ್ವಾಸಾತ್ ಪಡುನ್ ಗೆಲ್ಲ್ಯಾಕ್ನಿ ತೊ ಕಟೊರ್, ಖರೆ ತಿಯಾ ತೆಚ್ಯಾ ದಯಾಳ್‍ಪಾನಾಚ್ಯಾ ಅಸ್ರ್ಯಾತ್ ಹಾಸ್ ಜಾಲ್ಯಾರ್ ತುಕಾ ತೊ ದಯಾಳ್‍ಪಾನ್ ದಾಕ್ವುತಾ, ನಾಹೊಲ್ಯಾರ್ ತುಕಾಬಿ ತೊ ಕಾತ್ರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:22
33 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.


ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.


ನೀವು ಪ್ರಭುವಿನಲ್ಲಿ ಬಲವಾಗಿದ್ದರೆ, ನಮ್ಮಲ್ಲಿ ಜೀವ ತುಂಬಿದಂತಿರುವುದು.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.


“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”


“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ದೇವರು ಸಹಜವಾದ ಕೊಂಬೆಗಳನ್ನೇ ಉಳಿಸಿಲ್ಲದಿರುವುದರಿಂದ ನೀವು ನಂಬದಿದ್ದರೆ ಆತನು ನಿನ್ನನ್ನು ಉಳಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು