Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:23 - ಪರಿಶುದ್ದ ಬೈಬಲ್‌

23 ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರು ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ದೇವರು ಅವರನ್ನು ತಿರಿಗಿ ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ ಜುದೆವಾನಿ ಅಪ್ನಾಚೆ ವಿಶ್ವಾಸಾನ್‍ ನಸಲ್ಲೆ ಜಿವನ್ ಸೊಡುನ್ ಸೊಡ್ಲ್ಯಾನಿ ತರ್ ತೆಂಕಾ ತೊ ಅದ್ದಿಚ್ಯಾ ಜಾಗ್ಯಾಕ್ ಫಾಟಿ ನ್ಹೆವ್ನ್ ಥವ್ತಾ. ಕಶ್ಯಾಕ್ ಮಟ್ಲ್ಯಾರ್, ತೆಂಕಾ ಅನಿ ಪರ್‍ತುನ್ ತೆಂಚ್ಯಾ ಜಾಗ್ಯಾರ್ ಕಶಿ ಕರುಕ್ ದೆವಾಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:23
6 ತಿಳಿವುಗಳ ಹೋಲಿಕೆ  

ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ನಾನು ನಿನಗೆ ಹೇಳುವುದೇನೆಂದರೆ, ‘ಪ್ರಭುವಿನ ಹೆಸರಿನಲ್ಲಿ ಬರುವಾತನನ್ನು ದೇವರು ಆಶೀರ್ವದಿಸಲಿ’ ಎಂದು ನೀನು ಹೇಳುವ ತನಕ ನನ್ನನ್ನು ನೋಡುವುದೇ ಇಲ್ಲ.”


ಇದು, ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.


ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.


ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು