ರೋಮಾಪುರದವರಿಗೆ 11:4 - ಪರಿಶುದ್ದ ಬೈಬಲ್4 ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ದೆವಾನ್ ತೆಕಾ ತನ್ನಾ ಕಾಯ್ ಜಬಾಬ್ ದಿಲ್ಯಾನ್. ಮಿಯಾ ಮಾಜೆಸಾಟ್ನಿ ಮನುನ್ ಝುಟ್ಯಾ ಬಾಲ್ ಮನ್ತಲ್ಯಾ ದೆವಾಚೆ ಆರಾದನ್ ಕರಿನಸಲ್ಲ್ಯಾ ಸಾತ್ ಹಜಾರ್ ಘೊಮನ್ಸಾಕ್ನಿ ಥವ್ಲಾ”. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.