Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:7 - ಪರಿಶುದ್ದ ಬೈಬಲ್‌

7 ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದು ಅವರೆಲ್ಲರಿಗೆ ದೊರೆಯಲಿಲ್ಲ, ಅವರೊಳಗೆ ಆಯಲ್ಪಟ್ಟವರಿಗೆ ದೊರೆಯಿತು. ವಿುಕ್ಕವರು ಮೊಂಡರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಜಾಲ್ಯಾರ್ ಕಾಯ್? ಇಸ್ರಾಯೆಲಾಚ್ಯಾ ಲೊಕಾಕ್ನಿ ತೆನಿ ಕಾಯ್ ಹುಡ್ಕುಕ್ ಲಾಗಲ್ಲ್ಯಾನಿ ತೆ ಗಾವುಕ್‍ ನಾ. ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಉಲ್ಲ್ಯಾಶ್ಯಾ ತಾಂಡ್ಯಾಕ್ ತೆ ಸಗ್ಳೆ ಗಾವ್ಲೆ; ಅನಿ ಹುರಲ್ಲೆ ದೆವಾಚ್ಯಾ ಬಲ್ವನಿಕ್ ಆಯ್ಕಿನಸ್ತಾನಾ ರ್‍ಹಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:7
25 ತಿಳಿವುಗಳ ಹೋಲಿಕೆ  

ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ಆದ್ದರಿಂದ ದೇವರು ತಾನು ಯಾರಿಗೆ ಕರುಣೆಯನ್ನು ತೋರಬಯಸುತ್ತಾನೋ ಅವರಿಗೆ ಕರುಣೆಯನ್ನು ತೋರಿಸುತ್ತಾನೆ. ದೇವರು ಯಾರನ್ನು ಮೊಂಡರನ್ನಾಗಿ ಮಾಡಬಯಸುತ್ತಾನೋ ಅವರನ್ನು ಮೊಂಡರನ್ನಾಗಿ ಮಾಡುತ್ತಾನೆ.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಈಗಲೂ ಅದರಂತೆಯೇ ಆಗಿದೆ. ದೇವರು ತನ್ನ ಕೃಪೆಯ ಮೂಲಕ ಆರಿಸಿಕೊಂಡಿರುವ ಕೆಲವು ಜನರು ಇದ್ದಾರೆ.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು.


ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ. ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ.


ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.


ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.


ಹೀಗಿರಲಾಗಿ ನಾವೇನು ಮಾಡಬೇಕು? ನಾವು ಧರ್ಮಶಾಸ್ತ್ರದ ಅಧೀನದಲ್ಲಿರದೆ ಕೃಪೆಯ ಅಧೀನದಲ್ಲಿರುವುದರಿಂದ ಪಾಪ ಮಾಡಬೇಕೇ? ಇಲ್ಲ!


ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ.


“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”


“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣಹೊಂದುವರು” ಎಂದು ಹೇಳಿದನು.


“ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.


ಯೇಸು ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದನ್ನು ಅವರು ನೋಡಿದ್ದರೂ ಅದರ ಅರ್ಥವನ್ನು ಗ್ರಹಿಸಲಿಲ್ಲ. ಅವರು ಅದನ್ನು ಅರ್ಥಮಾಡಿಕೊಳ್ಳುವಷ್ಟು ಸಮರ್ಥರಾಗಿರಲಿಲ್ಲ.


ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು