Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:11 - ಪರಿಶುದ್ದ ಬೈಬಲ್‌

11 ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಬರೆ ಕರುನ್ ಕಾಮ್ ಕರಾ, ಅಳ್ಸಿ ಹೊವ್‍ನಕಾಶಿ. ತುಮ್ಚ್ಯಾ ಭಕ್ತಿನ್ ಪುರಾ ಮನಾನಿ ಅನಿ ಮ್ಹಿನತಿನ್ ಧನಿಯಾಚಿ ಸೆವಾ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:11
33 ತಿಳಿವುಗಳ ಹೋಲಿಕೆ  

ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.


ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.


ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.


ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,


ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು.


ಸೋಮಾರಿಗೆ ಯಾವ ಕೆಲಸವನ್ನೂ ಒಪ್ಪಿಸಬೇಡಿ. ಅವನು ಬಾಯಿಗೆ ಹುಳಿಯಂತೆಯೂ ಕಣ್ಣುಗಳಿಗೆ ಹೊಗೆಯಂತೆಯೂ ನಿಮ್ಮನ್ನು ಬೇಸರಗೊಳಿಸುವನು.


ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ಸೋಮಾರಿಯು ನಾಶಮಾಡುವ ವ್ಯಕ್ತಿಯಂತಿದ್ದಾನೆ.


ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.


ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


“ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.


ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ.


ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.


“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು