Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:12 - ಪರಿಶುದ್ದ ಬೈಬಲ್‌

12 ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮ್ಚ್ಯಾ ಬರೊಸ್ಯಾಕುಚ್ ತುಮ್ಕಾ ಖುಶಿನ್ ಥವ್ಕ್ ಸೊಡಾ, ಕಸ್ಟಾತ್ನಿ-ದುಕಾತ್ನಿ ಸೊಸುನ್ ಘೆವ್ನ್ ಜಾವಾ; ಸಗ್ಳ್ಯಾ ಎಳಾರ್ ಮಾಗ್ನಿ ಕರುಂಗೆತ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:12
71 ತಿಳಿವುಗಳ ಹೋಲಿಕೆ  

ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.


ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.


ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.


ಆದರೆ ನಾವು ಹಗಲಿಗೆ ಸೇರಿದವರಾದ್ದರಿಂದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನಂಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.


ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.


ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.


ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.


ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ.


ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು.


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯನ್ನು ಆಳುವುದರಲ್ಲಿ ನಂಬಿಗಸ್ತನಾಗಿದ್ದಾನೆ. ವಿಶ್ವಾಸಿಗಳಾದ ನಾವು ನಮಗಿರುವ ಮಹಾ ನಿರೀಕ್ಷೆಯಲ್ಲಿ ದೃಢವಾಗಿಯೂ ಹೆಮ್ಮೆಯಿಂದಲೂ ಇರುವುದಾಗಿದ್ದರೆ ದೇವರ ಮನೆಯವರಾಗಿದ್ದೇವೆ.


ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.


ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.


ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ.


ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ.


ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.


ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.


ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು