Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:15 - ಪರಿಶುದ್ದ ಬೈಬಲ್‌

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನ್ ಸಂತೊಸಾನ್ ಹಾತ್ ತೆಂಚ್ಯಾ ವಾಂಗ್ಡಾ ಸಂತೊಸಾನ್ ರ್‍ಹಾವಾ, ರಡ್ತಲ್ಯಾಂಚ್ಯಾ ವಾಂಗ್ಡಾ ರಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:15
20 ತಿಳಿವುಗಳ ಹೋಲಿಕೆ  

ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.


ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.


ದೇವರೇ, ಕಷ್ಟದಲ್ಲಿರುವವರಿಗಾಗಿ ನಾನು ಅತ್ತದ್ದು ನಿನಗೆ ಗೊತ್ತಿದೆ. ಬಡವರಿಗೋಸ್ಕರ ನನ್ನ ಹೃದಯವು ಬಹು ದುಃಖಗೊಂಡದ್ದು ನಿನಗೆ ತಿಳಿದಿದೆ.


ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.


ಯಾವನಾದರೂ ಬಲಹೀನನಾಗಿರುವಾಗ ನಾನೂ ಬಲಹೀನನಾಗಿರುತ್ತೇನೆ. ಯಾವನಾದರೂ ಪಾಪದಲ್ಲಿ ನಡೆಸಲ್ಪಟ್ಟರೆ ನನ್ನೊಳಗೆ ಕೋಪಗೊಳ್ಳುತ್ತೇನೆ.


ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಈ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.


ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.


ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.


ಜೆರುಸಲೇಮಿನ ಪೌಳಿಗೋಡೆಯ ಮತ್ತು ಅಲ್ಲಿಯ ಜನರ ವಿಚಾರವಾಗಿ ಕೇಳಿದಾಗ ನಾನು ತುಂಬಾ ಗಲಿಬಿಲಿಗೊಂಡೆನು; ನಾನು ಅಲ್ಲಿಯೇ ನೆಲದ ಮೇಲೆ ಕುಳಿತು ಅತ್ತೆನು; ದುಃಖಕ್ರಾಂತನಾದೆನು; ಅಲ್ಲದೆ ಅನೇಕ ದಿವಸಗಳವರೆಗೆ ಉಪವಾಸಮಾಡಿ ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.


ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.


ಅಳುವ ಸಮಯ, ನಗುವ ಸಮಯ. ಗೋಳಾಡುವ ಸಮಯ, ಕುಣಿದಾಡುವ ಸಮಯ.


ಆಗ ಇಥಿಯೋಪಿಯದವನಾದ ಎಬೆದ್ಮೆಲೆಕನು, “ಆ ಹರಿದುಹೋದ ಮತ್ತು ಹಳೆಯದಾದ ಬಟ್ಟೆಗಳನ್ನು ನಿನ್ನ ಕಂಕುಳಲ್ಲಿ ಇಟ್ಟುಕೋ. ನಾವು ನಿನ್ನನ್ನು ಮೇಲಕ್ಕೆಳೆಯುವಾಗ ನಿನ್ನ ಕಂಕುಳಿಗೆ ಹಗ್ಗಗಳಿಂದ ಗಾಯಗಳಾಗುವದಿಲ್ಲ” ಎಂದನು. ಯೆರೆಮೀಯನು ಎಬೆದ್ಮೆಲೆಕನು ಹೇಳಿದಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು