Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:16 - ಪರಿಶುದ್ದ ಬೈಬಲ್‌

16 ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರ್ರಿ, ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸಗ್ಳ್ಯಾಂಚ್ಯಾ ವಾಂಗ್ಡಾ ಎಕುಚ್ ರಿತಿನ್ ಚಲಾ. ತುಮಿ ಗರುಕಿ ಕರುಚೆ ನ್ಹಯ್, ಸಗ್ಳ್ಯಾಂಚ್ಯಾ ವಾಂಗ್ಡಾ ಎಕ್ ಮನಾಚೆ ಹೊವ್ನ್ ರ್‍ಹಾವಾ. ತುಮಿಚ್ ಶಾನೆ ಮನುನ್ ಚಿಂತುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:16
48 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ.


ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.


ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ನಿಮಗೆ ನೀವೇ ಮೋಸಮಾಡಿಕೊಳ್ಳಬೇಡಿ. ನಿಮ್ಮಲ್ಲಿರುವ ಯಾವನಾದರೂ ತಾನು ಈ ಲೋಕದಲ್ಲಿ ಜ್ಞಾನಿಯೆಂದು ಆಲೋಚಿಸಿಕೊಂಡರೆ ಅವನು ಮೂಢನಾಗಲೇಬೇಕು. ಆಗ ಆ ವ್ಯಕ್ತಿಯು ನಿಜವಾಗಿಯೂ ಜ್ಞಾನಿಯಾಗಬಲ್ಲನು.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು.


ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.


ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.


ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?


ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”


ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.


ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.


ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಬಡಜನರು ನಿಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ನೀವು ಜವಾಬ್ದಾರರಾಗಿರುವ ಆ ಮಂದೆಯ ಮೇಲೆ ದಬ್ಬಾಳಿಕೆ ಮಾಡಬೇಡಿ. ನೀವು ಅವರಿಗೆ ಉತ್ತಮ ಮಾದರಿಯಾಗಿರಿ.


ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.


“ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾ ಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.


ಇಲ್ಲ! ನಾವು ನಮ್ಮ ಹಿಂದಿನ ಪಾಪಮಯ ಜೀವಿತಗಳ ಪಾಲಿಗೆ ಸತ್ತುಹೋದೆವು. ಹೀಗಿರಲು, ನಾವು ಪಾಪದಲ್ಲೇ ಜೀವಿಸಲು ಹೇಗೆ ಸಾಧ್ಯ?


ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.


ಮೂಢನಿಗೆ ಅವನ ಮೂಢತನದ ಮಟ್ಟದಲ್ಲಿ ಉತ್ತರಿಸು; ಇಲ್ಲವಾದರೆ ಅವನು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಳ್ಳುವನು.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು