Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:18 - ಪರಿಶುದ್ದ ಬೈಬಲ್‌

18 ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಾದ್ಯ್ ಹೊತಾ ತವ್ಡೆ ತುಮಿ ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:18
24 ತಿಳಿವುಗಳ ಹೋಲಿಕೆ  

ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.


ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.


ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.


ಆದರೆ ದೇವರಾತ್ಮನು ಹುಟ್ಟಿಸುವುದು ಪ್ರೀತಿ, ಆನಂದ, ಶಾಂತಿ, ತಾಳ್ಮೆ, ಕರುಣೆ, ಉಪಕಾರ, ನಂಬಿಗಸ್ತಿಕೆ,


“ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.


ಕೆಡುಕರು ಯಾವಾಗಲೂ ಕೇಡು ಮಾಡಲಿಚ್ಛಿಸುವರು. ಸಮಾಧಾನವನ್ನು ಅಪೇಕ್ಷಿಸುವವರು ಸಂತೋಷವಾಗಿರುವರು.


ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


ಕೆಟ್ಟದ್ದನ್ನು ಬಿಟ್ಟು ಒಳ್ಳೆಯವುಗಳನ್ನು ಮಾಡಿರಿ. ಸಮಾಧಾನವನ್ನು ಬಯಸಿ ಅದನ್ನು ಪಡೆದುಕೊಳ್ಳಲು ಪ್ರಯತ್ನಿಸಿರಿ.


ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿಂದ ಗೌರವಿಸಿರಿ. ನೀವೆಲ್ಲರೂ ಸಮಾಧಾನದಿಂದ ಜೀವಿಸಿರಿ.


ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.


ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.


ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.


ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.


ನಿನಗೆ ಕೇಡನ್ನು ಮಾಡಿಲ್ಲದಿರುವವನನ್ನು ನಿಷ್ಕಾರಣವಾಗಿ ನ್ಯಾಯಾಲಯಕ್ಕೆ ಕೊಂಡೊಯ್ಯಬೇಡ.


ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.


ಆದಕಾರಣ ರೋಮಿನಲ್ಲಿರುವ ನಿಮಗೆ ಸುವಾರ್ತೆಯನ್ನು ತಿಳಿಸಲು ಬಹಳವಾಗಿ ಆಶಿಸುತ್ತೇನೆ.


ಅದಕ್ಕೆ ಅಬ್ರಹಾಮನು, “ನೀನು ನನ್ನನ್ನು ನೋಡಿಕೊಂಡಂತೆ ನಾನೂ ನಿನ್ನನ್ನು ನೋಡಿಕೊಳ್ಳುವೆನು” ಎಂದು ಪ್ರಮಾಣಮಾಡಿದನು.


ಯೆಫ್ತಾಹನ ದೂತರು ಈ ಸಂದೇಶವನ್ನು ಯೆಫ್ತಾಹನಿಗೆ ಮುಟ್ಟಿಸಿದರು. ಆಗ ಯೆಫ್ತಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು