Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:2 - ಪರಿಶುದ್ದ ಬೈಬಲ್‌

2 ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:2
61 ತಿಳಿವುಗಳ ಹೋಲಿಕೆ  

ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.


ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ದೇವರು ಹೇಳಿದ್ದೇನೆಂದರೆ, “ನಾನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನಿಟ್ಟು ನಿಮ್ಮ ಯೋಚನೆಯ ರೀತಿಯನ್ನು ಬದಲಾಯಿಸುವೆನು. ನಿಮ್ಮ ಕಲ್ಲಿನ ಹೃದಯವನ್ನು ತೆಗೆದುಬಿಟ್ಟು ಮೃದುವಾದ ಮಾನವ ಹೃದಯವನ್ನು ಕೊಡುವೆನು.


ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.


ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ನಾನು ಇವರಿಗೆ ನಿನ್ನ ವಾಕ್ಯಗಳನ್ನು ಕೊಟ್ಟಿದ್ದೇನೆ. ಈ ಲೋಕವು ಇವರನ್ನು ದ್ವೇಷಿಸುತ್ತದೆ. ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. ಆದ್ದರಿಂದ ಈ ಲೋಕವು ಇವರನ್ನು ದ್ವೇಷಿಸಿದೆ.


ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.


ಸಹೋದರ ಸಹೋದರಿಯರೇ, ಈ ಲೋಕದ ಜನರು ನಿಮ್ನನ್ನು ದ್ವೇಷಿಸುವಾಗ ಆಶ್ಚರ್ಯಗೊಳ್ಳದಿರಿ.


ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.


ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.


ನಿನ್ನಲ್ಲಿ ರಕ್ಷಣೆಗಾಗಿ ಪ್ರಾರ್ಥಿಸುವೆ. ನಿನ್ನ ಉಪದೇಶಗಳು ನನ್ನನ್ನು ಸಂತೋಷಗೊಳಿಸುತ್ತವೆ.


ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.


ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.


ನೀವು ಈಗಾಗಲೇ ದೇವರ ಒಳ್ಳೆಯತನವನ್ನು ರುಚಿ ನೋಡಿದ್ದೀರಿ.


ನಿನ್ನ ನುಡಿಗಳು ನನ್ನ ಬಾಯಲ್ಲಿ ಜೇನಿಗಿಂತಲೂ ಸಿಹಿಯಾಗಿವೆ.


ಹೀಗಿರಲು ಧರ್ಮಶಾಸ್ತ್ರ ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಒಳ್ಳೆಯದೂ ಆಗಿದೆ.


ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.


ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.”


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.


ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು