Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:3 - ಪರಿಶುದ್ದ ಬೈಬಲ್‌

3 ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:3
47 ತಿಳಿವುಗಳ ಹೋಲಿಕೆ  

ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ಅಜ್ಞಾನಿಯು ತನ್ನನ್ನು ಜ್ಞಾನಿಯೆಂದು ಭಾವಿಸಿಕೊಂಡರೆ ಅವನು ಮೂಢನಿಗಿಂತಲೂ ಕೀಳಾದವನು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?


ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.


ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರಿಗೆ ವಿಧೇಯನಾಗಿರು.


ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.


ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ.


ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು.


ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.


ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ಅವರು ಗೃಹಿಣಿಯರಿಗೆ, “ನಿಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸಿರಿ.


ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)


ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.


ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.


ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.


ಇದೇ ರೀತಿಯಲ್ಲಿ ಯುವಕರಿಗೆ ಜ್ಞಾನಿಗಳಾಗಿರಲು ತಿಳಿಸು.


ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು.


ಸ್ತ್ರೀಯರು ತಮಗೆ ಯೋಗ್ಯವಾದ ಉಡುಪುಗಳನ್ನು ಧರಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರ ಉಡುಪುಗಳು ಅವರು ಮಾನಸ್ಥೆಯರು ಎಂಬುದನ್ನು ತೋರಿಸುವಂಥವುಗಳಾಗಿರಬೇಕು. ಅವರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ತಲೆಕೂದಲನ್ನು ಅಲಂಕಾರಿಕವಾಗಿ ಕಟ್ಟಿಕೊಳ್ಳಕೂಡದು; ಬಂಗಾರವನ್ನು ಮತ್ತು ಮುತ್ತುಗಳನ್ನು ತೊಟ್ಟುಕೊಳ್ಳಕೂಡದು ಮತ್ತು ಬೆಲೆಬಾಳುವ ಬಟ್ಟೆಗಳನ್ನು ಧರಿಸಿಕೊಳ್ಳಕೂಡದು.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ನಾನು ಬರೆದಿರುವ ಈ ಸಂಗತಿಗಳನ್ನು ನೀವು ಓದಿದರೆ ಕ್ರಿಸ್ತನ ರಹಸ್ಯವಾದ ಸತ್ಯವನ್ನು ನಾನು ನಿಜವಾಗಿಯೂ ಅರ್ಥಮಾಡಿಕೊಂಡಿದ್ದೇನೆ ಎಂಬುದು ನಿಮಗೇ ತಿಳಿಯುತ್ತದೆ.


ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ.


ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.


ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು.


ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ.


ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.


ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.


ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.


ದೇವರು ತನ್ನ ಕೃಪೆಯ ಮೂಲಕ ನನಗೆ ಈ ಕೆಲಸವನ್ನು ಕೊಟ್ಟನೆಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ದೇವರು ಈ ಕೆಲಸವನ್ನು ನನಗೆ ಕೊಟ್ಟನು.


ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಈ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಈ ಸೇವೆಯನ್ನು ಒಳಗೊಂಡಿದೆ.


ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು