Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:6 - ಪರಿಶುದ್ದ ಬೈಬಲ್‌

6 ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆಯ ರೂಪವಾಗಿದ್ದರೆ ನಮ್ಮ ವಿಶ್ವಾಸ ವರಕ್ಕೆ ತಕ್ಕ ಹಾಗೆ ಪ್ರವಾದನೆ ಹೇಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಚೆಸಾಟ್ನಿ ದೆವಾನ್ ಅಮ್ಕಾ ದಿಲ್ಲ್ಯಾ ಕುರ್ಪೆಚ್ಯಾ ವೈನಾ ಅಮ್ಕಾ ಹೊತ್ತಿ ದೆನ್ಗಿಯಾ ದುಸ್ರಿ-ದುಸ್ರಿ ಹಾತ್; ಎಕ್ಲ್ಯಾಕ್ ಪ್ರವಾದ್ ಕರ್‍ತಲೆ ದೆನ್ಗಿ ದಿಲ್ಲಿ ಹಾಯ್ ಜಾಲ್ಯಾರ್ ತೊ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾನ್ ಪ್ರವಾದ್ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:6
31 ತಿಳಿವುಗಳ ಹೋಲಿಕೆ  

ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.


ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.


ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.


ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.


ಪ್ರೀತಿಯೇ ನಿಮ್ಮ ಗುರಿಯಾಗಿರಲಿ. ಅಲ್ಲದೆ ಪವಿತ್ರಾತ್ಮನ ವರಗಳನ್ನು ಹೊಂದಿಕೊಳ್ಳಲು ವಿಶೇಷವಾಗಿ ಪ್ರವಾದಿಸುವ ವರವನ್ನು ಬಹಳವಾಗಿ ಅಪೇಕ್ಷಿಸಬೇಕು.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಪ್ರವಾದನೆಯನ್ನು ಹೀನೈಸಬೇಡಿ.


ಇಬ್ಬರು ಅಥವಾ ಮೂವರು ಪ್ರವಾದಿಗಳು ಮಾತ್ರ ಮಾತಾಡಬೇಕು. ಅವರು ಹೇಳುವುದನ್ನು ಇತರರು ವಿವೇಚಿಸಬೇಕು.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.


ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.


ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ಆ ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರದ ಮೇಲೆ ಅವನಿಗೆ ತೀರ್ಪಾಗುವುದು.


ಮದುವೆಯಾಗಿಲ್ಲದ ನಾಲ್ಕುಮಂದಿ ಹೆಣ್ಣುಮಕ್ಕಳು ಅವನಿಗಿದ್ದರು. ಅವರೆಲ್ಲರಿಗೂ ಪ್ರವಾದಿಸುವ ವರವಿತ್ತು.


ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.


ದೇಹದ ಪ್ರತಿಯೊಂದು ಅಂಗವು ಒಂದೇ ರೀತಿಯ ಅಂಗವಾಗಿದ್ದರೆ, ಆಗ ದೇಹವೇ ಇರುತ್ತಿರಲಿಲ್ಲ. ಆದರೆ ದೇವರು ತನ್ನ ಇಚ್ಛೆಗನುಸಾರವಾಗಿ ದೇಹದಲ್ಲಿ ಅಂಗಾಂಗಗಳನ್ನು ಇಟ್ಟಿದ್ದಾನೆ. ಆತನು ಅವುಗಳಲ್ಲಿ ಪ್ರತಿಯೊಂದಕ್ಕೂ ಸ್ಥಳವನ್ನು ಗೊತ್ತುಪಡಿಸಿದ್ದಾನೆ.


ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.


“ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು