ರೋಮಾಪುರದವರಿಗೆ 12:8 - ಪರಿಶುದ್ದ ಬೈಬಲ್8 ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಬೋಧಿಸುವವನು ಬೋಧಿಸುವದರಲ್ಲಿಯೂ ಬುದ್ಧಿ ಹೇಳುವವನು ಬುದ್ಧಿ ಹೇಳುವದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ಹಿರೀತನ ನಡಿಸುವವನು ಆಸಕ್ತಿಯಿಂದ ನಡಿಸಲಿ. ಕಷ್ಟದಲ್ಲಿರುವವರಿಗೆ ಉಪಕಾರ ಮಾಡುವವನು ಸಂತೋಷವಾಗಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ದುಸ್ರ್ಯಾಕ್ನಿ ಧೈರೊ ಸಾಂಗ್ತಲೊ ಮನುನ್ ರ್ಹಾಲ್ಯಾರ್ ತೊ ದುಸ್ರ್ಯಾಕ್ನಿ ಉರ್ಬಾ ಭರಿ ಸರ್ಕೆ ಕರುನ್ಗೆತ್ ರ್ಹಾಂವ್ದಿತ್. ಜೆ ಕೊನ್ ದುಸ್ರ್ಯಾಂಚ್ಯಾ ವಾಂಗ್ಡಾ ಮಿಳುನ್ ವಾಟುನ್ ಘೆವ್ನ್ ಹಾತ್ ತೆನಿ ತೆ ಫುರಾ ಮನಾನಿ ಕರುಂದಿತ್ ; ಅದಿಕಾರ್ ಚಾಲ್ವುತಲೊ ಬರ್ಯಾ ಬಾಸೆನ್ ಅದಿಕಾರ್ ಚಾಲ್ವುಂದಿತ್, ದಯಾಳ್ ಕಾಮಾ ಕರ್ತಲೊ ಹಾಸ್ಮುರ್ಕ್ಯಾ ತೊಂಡಾನ್ ಕರುಂದಿತ್. ಅಧ್ಯಾಯವನ್ನು ನೋಡಿ |
ನೀವು ಮಾಡುವ ಈ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.